HD Kumaraswamy: ಮಕ್ಕಳಿಂದ ಶೌಚಾಲಯ ಕ್ಲೀನ್; ಶಿಕ್ಷಕರು ಬಲಿಪಶು ಆದ್ರು ಎಂದ ಮಾಜಿ ಸಿಎಂ

1 min read

ಬೆಂಗಳೂರು: ಶಾಲೆಯಲ್ಲಿ ಮಕ್ಕಳ (School Student) ಕಡೆಯಿಂದ ಶೌಚಾಲಯ ಮತ್ತು ಮಲದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣದ ಕುರಿತು ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ (Former CM HD Kumaraswamy) ಪ್ರತಿಕ್ರಿಯಿಸಿದ್ದಾರೆ. ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ. ನಮ್ಮ ವ್ಯವಸ್ಥೆ, ಮನಸ್ಸುಗಳು ಎಷ್ಟು ಮಲೀನವಾಗಿವೆ ಎನ್ನುವುದಕ್ಕೆ ಎರಡೂ ಘಟನೆಗಳು ಸಾಕ್ಷಿ ಎಂದಿದ್ದಾರೆ.

ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಸೂಕ್ಷ್ಮ ಮನಸ್ಸಿನಿಂದ ವರ್ತಿಸಬೇಕಿತ್ತು. ‘ಆಚಾರ್ಯದೇವೋ ಭವ’ ಎನ್ನುವ ಭಾರತೀಯ ಪರಂಪರೆಯನ್ನು ಅವರೊಮ್ಮೆ ನೆನಪು ಮಾಡಿಕೊಳ್ಳಬೇಕಿತ್ತು. ಆದಾಗ್ಯೂ, ಈ ಎರಡೂ ಘಟನೆಗಳಲ್ಲಿ ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸರಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಸರಕಾರಕ್ಕೆ ಹೆಚ್​ಡಿಕೆ ಮಾತಿನ ಚಾಟಿ

ಸರಕಾರಿ ಶಾಲೆ ಒಂದರ ಸ್ವಚ್ಛತೆ, ಸಂಪೂರ್ಣ ನಿರ್ವಹಣೆ ಸೇರಿ ಸಾದಿಲ್ವಾರು ವೆಚ್ಚಗಳಿಗೆ ಕೊಡುತ್ತಿರುವ ಹಣವೆಷ್ಟು? ಈ ಹಣ ನಿಯಮಿತವಾಗಿ ಬಿಡುಗಡೆ ಆಗುತ್ತಿಲ್ಲ. ನನಗೆ ಬಂದಿರುವ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ಈ ಅನುದಾನವನ್ನೇ ಕೊಟ್ಟಿಲ್ಲ. ಕೊಡುವ ಅತ್ಯಲ್ಪ ಹಣದಲ್ಲಿ ಶಿಕ್ಷಕರು ಏನು ಮಾಡಿಯಾರು? ಈ ಬಗ್ಗೆ ಸರಕಾರ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಮಾಜಿ ಸಿಎಂ ಚಾಟಿ ಬೀಸಿದ್ದಾರೆ.

ಶಿಕ್ಷಕರನ್ನ ಬಲಿಪಶುಗಳನ್ನಾಗಿ ಮಾಡಲಾಗ್ತಿದೆ

ಈ ಎರಡೂ ಪ್ರಕರಣಗಳಲ್ಲಿ ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು. ಆದರೆ, ಶಿಕ್ಷಕರನ್ನಷ್ಟೇ ಬಲಿಪಶುಗಳನ್ನಾಗಿ ಮಾಡುವ ಕೆಲಸ ಆಗುತ್ತಿದೆ. ಹಾಗೆಯೇ; ಬೋಧಕರು, ಶಾಲಾ ಸಿಬ್ಬಂದಿ ಕೂಡ ಇಂಥ ಘಟನೆಗಳಿಗೆ ಅವಕಾಶ ಕೊಡಬಾರದು ಎಂದು ಹೆಚ್​ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ನೀರಿನ ತೊಟ್ಟಿಗೆ ಬಿದ್ದು ಕಂದಮ್ಮ ಸಾವು

ಇಟ್ಟಿಗೆ ಭಟ್ಟಿಯ ನೀರಿನ ತೊಟ್ಟಿಗೆ ಬಿದ್ದು ಮೂರು ವರ್ಷ ಕಂದಮ್ಮ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯಲ್ಲಿ ನಡೆದಿದೆ.

3 ವರ್ಷದ ಮಾನ್ವಿತಾ ಮಲ್ಲಕಾರ್ಜುನ ಮೃತ ಕಂದಮ್ಮ. ಇಟ್ಟಿಗೆ ಭಟ್ಟಿಯಲ್ಲಿ  ಮಗುವಿನ ತಾಯಿ ಕೆಲಸ ಮಾಡ್ತಿದ್ರು. ಈ ವೇಳೆ ಮಗು ಇಟ್ಟಿಗೆ ಭಟ್ಟಿಗೆ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ.

You May Also Like

More From Author

+ There are no comments

Add yours