ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ (Job Reservation) ಕರ್ನಾಟಕ ಸರ್ಕಾರ (Karnataka Government) ಮಹತ್ವದ ಹೆಜ್ಜೆ ಇಟ್ಟಿದೆ. ಸಿ ಮತ್ತು ಡಿ ದರ್ಜೆ ಉದ್ಯೋಗಳಲ್ಲಿ 100% ಮೀಸಲಾತಿಗೆ ತೀರ್ಮಾನಿಸಿದೆ. ನಿಯಮ ಉಲ್ಲಂಘಿಸಿದರೆ 25 ಸಾವಿರ ರೂ. ತನಕ ದಂಡ ವಿಧಿಸುವ ಅಸ್ತ್ರ ಪ್ರಯೋಗ ಮಾಡಲಾಗುತ್ತಿದೆ.
ರಾಜ್ಯದ ಕೈಗಾರಿಕೆಗಳ ಉದ್ಯೋಗಗಳು ಉತ್ತರ ಭಾರತದ ರಾಜ್ಯಗಳ ಪಾಲಾಗುತ್ತಿರುವ ಆತಂಕ ವ್ಯಕ್ತವಾಗಿತ್ತು. ಹಾಗಾಗಿ ರಾಜ್ಯದ ಭೂಮಿ, ಮೂಲಭೂತ ಸೌಕರ್ಯಗಳನ್ನ ಪಡೆದ ಕೈಗಾರಿಕೆಗಳಲ್ಲಿ, ಹಲವು ಖಾಸಗಿ ಸಂಸ್ಥೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡಬೇಕು ಎಂಬ ಕೂಗು ಎದ್ದಿತ್ತು. ಹಾಗಾಗಿ ರಾಜ್ಯದಲ್ಲಿನ ಎಲ್ಲಾ ಕೈಗಾರಿಕೆಗಳು ಮತ್ತು ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ರಾಜ್ಯ ಮುಂದಾಗುತ್ತಿದೆ.
ಶುಕ್ರವಾರ ಅಥವಾ ಸೋಮವಾರ ವಿಧಾನಸಭೆಯಲ್ಲಿ ಕರ್ನಾಟಕ ರಾಜ್ಯ ಕೈಗಾರಿಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳ ಉದ್ಯೋಗ ಮಸೂದೆ -2024 ಮಂಡನೆ ಆಗಲಿದೆ. ಕಾರ್ಮಿಕ ಇಲಾಖೆಯಿಂದ ವಿಧೇಯಕ ಮಂಡನೆಗೆ ಮುಂದಾಗಿದ್ದು ಸಂಪುಟ ಸಭೆಯಲ್ಲೂ ಮಸೂದೆ ಮಂಡನೆಗೆ ಒಪ್ಪಿಗೆ ಸಿಕ್ಕಿದೆ.
+ There are no comments
Add yours